ಪತ್ರಿಕಾ
ಪ್ರಕಟಣೆ ದಿನಾಂಕ: 26-01-2018
ಪೆಟ್ರೋಲ್ ಟ್ಯಾಂಕರ್ ಲಾರಿ
ಡಿಕ್ಕಿ ಪಾದಾಚಾರಿ ಸಾವು
ದಿನಾಂಕ: 25-01-2018 ರಂದು
ರಾತ್ರಿ 08-00 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಬಾಣಾವರ
ಪೇಟೆ ಮಸೀದಿ ಹತ್ತಿರ ವಾಸಿ ಸಾಬುಲಾಲ್ ಸಾಬ್ ರವರು
ತಮ್ಮ ಮಗ ಆದಿಲ್ರವರೊಂದಿಗೆ ಅರಸೀಕೆರೆಗೆ ಹೋಗಲು ಬಾಣಾವರ ಯಮಹ ಶೋ ರೂಂ ಮುಂಭಾಗದ
ಎನ್ಹೆಚ್-206 ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ
ಅರಸೀಕೆರೆ ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗಲು ಬರುತ್ತಿದ್ದ ಕೆಎ-01-ಎಸಿ-1539 ರ
ಪೆಟ್ರೋಲ್ ಟ್ಯಾಂಕರ್ ಲಾರಿಯ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು
ಡಿಕ್ಕಿ ಮಾಡಿದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಚಿಕಿತ್ಸೆಗಾಗಿ ಅರಸೀಕೆರೆ ಸರ್ಕಾರಿ
ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ
ಚಿಕಿತ್ಸೆಗಾಗಿ ಹಾಸನ ಸಕರ್ಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಸೇರಿಸಿದ್ದು, ಚಿಕಿತ್ಸೆ
ಫಲಕಾರಿಯಾಗದೆ ಸಾಬು ಲಾಲ್ ಸಾಬ್, 60 ವರ್ಷ ರವರು
ಮೃತಪಟ್ಟಿರುತ್ತಾರೆಂದು ಮೃತರ ಮಗ ಶ್ರೀ ಆದಿಲ್ ರವರು ಕೊಟ್ಟ ದೂರಿನ ಮೇರೆಗೆ ಬಾಣಾವರ ಠಾಣೆಯಲ್ಲಿ
ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತದೆ.
No comments:
Post a Comment