* * * * * * HASSAN DISTRICT POLICE

Saturday, March 17, 2018

PRESS NOTE : 17-03-2018


ಪತ್ರಿಕಾ ಪ್ರಕಟಣೆ               ದಿನಾಂಕ: 17-03-2018.

ಕೆಎಸ್ಆರ್ಟಿಸಿ ಬಸ್ ಸೈಕಲ್ಗೆ ಡಿಕ್ಕಿ ವಿದ್ಯಾರ್ಥಿ ಸಾವು

       ದಿನಾಂಕ: 16-03-2018 ರಂದು ಬೆಳಿಗ್ಗೆ 9-30 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಹಳೇಬೀಡು ಹೋಬಳಿ, ಮಲ್ಲಾಪುರ ಗ್ರಾಮದ ವಾಸಿ ಶ್ರೀ ಚಂದ್ರಶೇಖರ, ರವರ ಮಗ ಕು|| ಕಾರ್ತಿಕ್, ಸೈಕಲ್ನಲ್ಲಿ  ಶಾಲೆಗೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದು, ಶಾಲೆಗೆ ಹೋಗಲು ಬೇಲೂರು ತಾಲ್ಲೂಕು, ಹಳೇಬೀಡು ಹೋಬಳೀ, ಬಿದಕೆರೆ ಕ್ರಾಸ್, ಹಳೇಬೀಡು-ಮಲ್ಲಾಪುರ ರಸ್ತೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕೆಎ-13 ಎಫ್-1861 ರ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಸೈಕಲ್ಗೆ ಡಿಕ್ಕಿ ಮಾಡಿದ ಪರಿಣಾಮ, ಶ್ರೀ ಕಾರ್ತಿಕ್, ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಳೇಬೀಡಿನ ಸಕರ್ಾರಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಲಾಗಿ ಶ್ರೀ ಕಾರ್ತಿಕ್ ಬಿನ್ ಈಶ್ವರಪ್ಪ, 12 ವರ್ಷ, ಮಲ್ಲಾಪುರ ಗ್ರಾಮ, ಹಳೇಬೀಡು ಹೋಬಳಿ, ಬೇಲೂರು ತಾಲ್ಲೂಕು ರವರು ಮೃತಪಟ್ಟಿರುತ್ತಾರೆಂದು ತಿಳಿಸಿದ ಮೇರೆಗೆ ಮೃತರ ತಂದೆ ಶ್ರೀ ಈಶ್ವರಪ್ಪ, ರವರು ಕೊಟ್ಟ ದೂರಿನ ಮೇರೆಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಹುಡುಗ ಕಾಣೆ
   ದಿನಾಂಕ: 27-02-2018 ರಂದು ಬೆಳಿಗ್ಗೆ 10-00 ಗಂಟೆಗೆ ಹಾಸನ ತಾಲ್ಲೂಕು, ಶಾಂತಿಗ್ರಾಮ ಹೋಬಳಿ, ಉಗನೆ  ತಿಮ್ಮನಹಳ್ಳಿ ಗ್ರಾಮದ ವಾಸಿ ಶ್ರೀ ಈಶ್ವರಪ್ಪ, ರವರ ಮಗ ಶ್ರೀ ಸುನಿಲ್, ರವರಿಗೆ ಹಾಸನ ಕೋರ್ಟ್ಗೆ ಹೋಗಲು ಹೇಳಿದ್ದು, ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ಸುನಿಲ್ನ ತಂದೆ ಶ್ರೀ ಈಶ್ವರಪ್ಪ, ರವರು ಕೊಟ್ಟ ದೂರಿನ ಮೇರೆಗೆ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗನ ಚಹರೆ: ಶ್ರೀ ಸುನಿಲ್ ಬಿನ್ ಈಶ್ವರಪ್ಪ, 26 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು ಕನ್ನಡ ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ 08172-258038 ಕ್ಕೆ ಸಂಪರ್ಕಿಸುವುದು.

ಅಪರಿಚಿತ ವಾಹನ ಬೈಕಿಗೆ ಡಿಕ್ಕಿ ಬೈಕ್ ಸವಾರನ ಸಾವು
      ದಿನಾಂಕ: 15-03-2018 ರಂದು ರಾತ್ರಿ 09-00 ಗಂಟೆ ಸಮಯದಲ್ಲಿ  ಅರಸೀಕೆರೆ ತಾಲ್ಲೂಕು, ಕಣಕಟ್ಟೆ ಹೋಬಳಿ, ಬೊಮ್ಮಸಮುದ್ರ ಗ್ರಾಮದ ಚನ್ನಬಸವನಾಯ್ಕ ರವರ ಬಾಬ್ತು ಕೆಎ-05-ಈಆರ್-5532 ರ ಬೈಕಿನಲ್ಲಿ ಕೆಲಸದ ನಿಮಿತ್ತ ಪಂಚನಹಳ್ಳಿಗೆ ಹೋಗಲು ಬೊಮ್ಮಸಮುದ್ರ ಗ್ರಾಮದ ಕೊಟ್ಟುರಪ್ಪ ರವರ ಜಮೀನಿನ ಹತ್ತಿರ ಟಾರು ರಸ್ತೆಯಲ್ಲಿ  ಹೋಗುತ್ತಿದ್ದಾಗ ಯಾವುದೋ ವಾಹನದ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಹೋಗಿ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿ  ಚನ್ನಬಸವನಾಯ್ಕ  ಬಿನ್ ಕರಿಬಸವನಾಯ್ಕ, 38 ವರ್ಷ ರವರು ಮೃತಪಟ್ಟಿರುತ್ತಾರೆಂದು ಮೃತರ ಅಣ್ಣ ಶ್ರೀ ರಾಜಪ್ಪ ರವರು ಕೊಟ್ಟ ದೂರಿನ ಮೇರೆಗೆ  ಬಾಣಾವರ ಠಾಣೆಯಲ್ಲಿ  ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತದೆ.

ಗಂಡಸು ಕಾಣೆ
      ದಿನಾಂಕ: 27-02-2018 ರಂದು  ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ  ಹಾಸನ ತಾಲ್ಲೂಕು, ಸಾಲಗಾಮೆ ಹೋಬಳಿ, ಉಗನೆ ತಿಮ್ಮನಹಳ್ಳಿ ಗ್ರಾಮದ ಈಶ್ವರಪ್ಪ ರವರ ಮಗ ಸುನಿಲ್  ಕೋರ್ಟಿಗೆ ಹೋಗುವುದಾಗಿ ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರುವುದಿಲ್ಲ. ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಪತ್ತೆ ಮಾಡಿಕೊಡಬೇಕೆಂದು  ಸುನಿಲ್ ರವರ ತಂದೆ ಶ್ರೀ ಈಶ್ವರಪ್ಪ ರವರು ದಿನಾಂಕ: 16-03-2018 ರಂದು ಕೊಟ್ಟ ದೂರಿನ ಮೇರೆಗೆ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತದೆ. ಕಾಣೆಯಾದವರ ಚಹರೆ: ಸುನಿಲ್ ಬಿನ್ ಈಶ್ವರಪ್ಪ, 26 ವರ್ಷ, 5'6'' ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಸುಳಿವು ಸಿಕ್ಕಲ್ಲಿ ಹಾಸನ ಗ್ರಾಮಾಂತರ ಠಾಣೆ ಫೋನ್ ನಂ. 08172-268630 ಕ್ಕೆ ಸಂಪರ್ಕಿಸುವುದು.


No comments: