ಪತ್ರಿಕಾ ಪ್ರಕಟಣೆ ದಿನಾಂಕ: 12-04-2018
ಕೆಎಸ್ಆರ್ಟಿಸಿ ಬಸ್ಸ್ ನಿರ್ಲಕ್ಷ್ಯತೆ
ಬಸ್ಸ್ ಇಳಿಯುತ್ತಿದ್ದ ಮಹಿಳೆ ಸಾವು : ದಿನಾಂಕ: 11-04-2018 ಂದು ಬೆಳಿಗ್ಗೆ 9-00 ಗಂಟೆ ಸಮಯದಲ್ಲಿ ಹೊಳೆನಸೀಪು ತಾಲ್ಲೂಕು, ಹಳ್ಳಿಮೈಸೂರು ಹೋಬಳಿ, ಓಡನಹಳ್ಳಿ ಗ್ರಾಮದ ವಾಸಿ
ಶ್ರೀಂತಿ ಹುಚ್ಚಮ್ಮ, ರವರು ಹೊಳೆನರಸೀಪುರಕ್ಕೆ
ಹೋಗಿ ಕೆಲಸ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಹೋಗಲು ಕೆಎ-13, ಎಫ್-1817 ರ ಬಸ್ಸಿನಲ್ಲಿ ಓಡನಹಳ್ಳಿ ಗ್ರಾಮದಲ್ಲಿ
ಇಳಿಯುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ
ಓಡಿಸಿದ್ದರ ಪರಿಣಾಮ ಶ್ರೀಮತಿ ಹುಚ್ಚಮ್ಮ, ರವರಿಗೆ ತೀವ್ರ
ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಕರ್ಾರಿ
ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ
ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸಕರ್ಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಶ್ರೀಮತಿ
ಹುಚ್ಚಮ್ಮ ಕೋಂ ಲೇಟ್ ಜವರೇಗೌಡ, 50ವರ್ಷ, ಓಡನಹಳ್ಳಿ ಗ್ರಾಮ, ಹಳ್ಳಿಮೈಸೂರು
ಹೋಬಳಿ,
ಚನ್ನರಾಯಪಟ್ಟಣ ತಾಲ್ಲೂಕು, ರವರು ಮಾರ್ಗ ಮಧ್ಯೆ ಮೃತಪಟ್ಟಿರುತ್ತಾರೆಂದು ಮೃತರ ಮಗಳು ಶ್ರೀಮತಿ ಸಾವಿತ್ರಮ್ಮ, ರವರು ಕೊಟ್ಟ ದೂರಿನ ಮೇರೆಗೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ
ಬಂಧನ, ಬಂಧಿತನಿಂದ
ಸುಮಾರು 844/- ಬೆಲೆಯ
ಮದ್ಯ ವಶ:
ದಿನಾಂಕ: 11-04-2018 ರಂದು ಸಂಜೆ 4-30 ಗಂಟೆ ಸಮಯದಲ್ಲಿ
ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ, ಯರೇಹಳ್ಳಿ ಗ್ರಾಮದ ವಾಸಿ ಶ್ರೀ ಯೋಗೇಶ್, ರವರ ಬಾಬ್ತು ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ರವಿಕುಮಾರ್, ಎಂ, ಪಿಎಸ್ಐ, ಗೊರೂರು ಪೊಲೀಸ್ ಠಾಣೆ. ರವರಿಗೆ ಬಂದ ಮಾಹಿತಿ ಮೇರೆಗೆ
ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ
ಮಾರಾಟ ಮಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಯೋಗೇಶ್ ಬಿನ್ ಜವರೇಗೌಡ, ಯರೇಹಳ್ಳಿ ಗ್ರಾಮ, ಕಟ್ಟಾಯ ಹೋಬಳಿ, ಹಾಸನ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು
ಮಾರಾಟಕ್ಕಿಟ್ಟಿದ್ದ ಸುಮಾರು 844/- ಬೆಲೆಯ ಮದ್ಯವನ್ನು
ಅಮಾನತ್ತುಪಡಿಸಿಕೊಂಡು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.
ಮನುಷ್ಯ ಕಾಣೆ : ದಿನಾಂಕ: 10-04-2018 ರಂದು ಮಧ್ಯಾಹ್ನ 12-00 ಗಂಟೆ ಸಮಯದಲ್ಲಿ
ಅರಸೀಕೆರೆ ತಾಲ್ಲೂಕು, ಬಾಣಾವರ ಹೋಬಳಿ.
ಕೆಂಕೆರೆಹಳ್ಳಿ ಗ್ರಾಮದ ವಾಸಿ ಶ್ರೀ ದೇವೇಂದ್ರಪ್ಪ, ರವರು ಬಾಣಾವರ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ
ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ದೇವೇಂದ್ರಪ್ಪ, ರವರ ಮಗ ಶ್ರೀ ಕಿರಣ್ಕುಮಾರ್, ರವರು ಕೊಟ್ಟ ದೂರಿನ ಮೇರೆಗೆ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಣೆಯಾದ ವ್ಯಕ್ತಿಯ ಚಹರೆ: ಶ್ರೀ ದೇವೇಂದ್ರಪ್ಪ, 57 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೋಗುವಾಗ ನೀಲಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಫ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ 08174-235633 ಕ್ಕೆ ಸಂಪರ್ಕಿಸುವುದು.
No comments:
Post a Comment