ಪತ್ರಿಕಾ
ಪ್ರಕರಣೆ ದಿನಾಂಕ: 17-05-2018.
ಕಾರು ಡಿಕ್ಕಿ, ಪಾದಚಾರಿ ಸಾವು:
ದಿನಾಂಕ: 16-05-2018 ರಂದು ಸಂಜೆ 4-15 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣಬೆಳಗೊಳ ಹೋಬಳಿ,
ಸುಗ್ಗನಕೊಪ್ಪಲು ಗ್ರಾಮದ ವಾಸಿ ಶ್ರೀ
ಮಂಜೇಗೌಡ, ರವರು ಚನ್ನರಾಯಪಟ್ಟಣ ತಾಲ್ಲೂಕು, ಕೊತ್ತನಘಟ್ಟ ಗೇಟ್,
ಶ್ರವಣಬೆಳಗೊಳ-ಸಾಸಲು ರಸ್ತೆ ಹತ್ತಿರ
ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ
ಕೆಎ-03, ಎಂ.ಸಿ-9558 ರ ಕಾರಿನ
ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಶ್ರೀ ಮಂಜೇಗೌಡ, ರವರಿಗೆ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಶ್ರವಣಬೆಳಗೊಳ ಸಕರ್ಾರಿ ಆಸ್ಪತ್ರೆ ಕರೆದುಕೊಂಡು ಹೋಗುತ್ತಿದ್ದಾಗ
ಶ್ರೀ ಮಂಜೇಗೌಡ ಬಿನ್ ಶಿವೇಗೌಡ,
55 ವರ್ಷ, ಸುಗ್ಗನಕೊಪ್ಪಲು ಗ್ರಾಮ,
ಶ್ರವಣಬೆಳಗೊಳ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು ರವರು ಮಾರ್ಗಮಧ್ಯೆ ಮೃತಪಟ್ಟಿರುತ್ತಾರೆಂದು ಮೃತರ ಮಗ
ಶ್ರೀ ಬಲರಾಮ, ರವರು ಕೊಟ್ಟ ದೂರಿನ ಮೇರೆಗೆ ಶ್ರವಣಬೆಳಗೊಳ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಬೈಕ್ನ ನಿಯಂತ್ರಣ ತಪ್ಪಿ, ಬೈಕ್ ಸವಾರ ಸಾವು:
ದಿನಾಂಕ: 16-05-2018 ರಂದು ಬೆಳಿಗ್ಗೆ 11-00 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಬಿಕ್ಕೋಡು ಹೋಬಳಿ,
ಹುಸ್ಕೂರು ಗ್ರಾಮದ ವಾಸಿ ಶ್ರೀ
ಹಾಲಪ್ಪಶೆಟ್ಟಿ, ರವರ ಬಾಬ್ತು ಕೆಎ-46, ಇ-5663 ರ ಹೀರೋ
ಫ್ಯಾಷನ್ ಬೈಕ್ನಲ್ಲಿ ಕೆಲಸದ ನಿಮಿತ್ತ ಆಲೂರಿಗೆ
ಹೋಗಿದ್ದು, ಕೆಲಸ ಮುಗಿಸಿಕೊಂಡು ವಾಪಸ್ ಬೇಲೂರು ತಾಲ್ಲೂಕು, ಬಿಕ್ಕೋಡು ಹೋಬಳಿ,
ಲಕ್ಕೇನಹಳ್ಳಿ ಗ್ರಾಮದ ಹತ್ತಿರ
ಹೋಗುತ್ತಿದ್ದಾಗ ಬೈಕ್ನ ನಿಯಂತ್ರಣ ತಪ್ಪಿ ಶ್ರೀ ಹಾಲಪ್ಪಶೆಟ್ಟಿ, ರವರು ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಿ,
ಶ್ರೀ ಹಾಲಪ್ಪಶೆಟ್ಟಿ ಬಿನ್
ಷಣ್ಮಖಶೆಟ್ಟಿ, 46 ವರ್ಷ, ಹುಸ್ಕೂರು
ಗ್ರಾಮ, ಬಿಕ್ಕೋಡು ಹೋಬಳಿ, ಬೇಲೂರು ತಾಲ್ಲೂಕು. ರವರು ಮೃತಪಟ್ಟಿರುವುದಾಗಿ ತಿಳಿಸಿದ ಮೇರೆಗೆ ಮೃತರ ಅಣ್ಣ
ಶ್ರೀ ಗುರುಪ್ಪಶೆಟ್ಟಿ, ರವರು ಕೊಟ್ಟ ದೂರಿನ ಮೇರೆಗೆ ಅರೇಹಳ್ಳಿ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಮನುಷ್ಯ ಕಾಣೆ:
ದಿನಾಂಕ: 01-05-2018 ರಂದು ಬೆಳಿಗ್ಗೆ 8-00 ಗಂಟೆ ಸಮಯದಲ್ಲಿ ಹಾಸನದ ವಲ್ಲಬಾಯಿ ರಸ್ತೆ, ಅಯ್ಯಪ್ಪಸ್ವಾಮಿ ಕ್ಯಾಂಟೀನ್ ಹತ್ತಿರದ ವಾಸಿ ಶ್ರೀ ಪ್ರಕಾಶ್ ರಾವ್, ರವರು ಚರ್ಚ್ಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ
ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ಪ್ರಕಾಶ್ ರಾವ್, ರವರ ತಮ್ಮ ಶ್ರೀ ಸಂತೋಷ್ಜೀ ರಾವ್, ರವರು ಕೊಟ್ಟ
ದೂರಿನ ಮೇರೆಗೆ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗನ
ಚಹರೆ: ಶ್ರೀ ಪ್ರಕಾಶ್ ರಾವ್ ಬಿನ್ ಮಿಥೇಲ್ ರಾವ್, 54 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ,
ಸಾಧಾರಾಣ ಮೈಕಟ್ಟು, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಶರ್ಟ್ ಮತ್ತು ಕಪ್ಪು ಫ್ಯಾಂಟ್
ಧರಿಸಿರುತ್ತಾರೆ. ಈ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಪೆನ್ಷನ್ ಮೊಹಲ್ಲಾ ಠಾಣೆ ಪೋನ್ ನಂ. 08172-272260 ಕ್ಕೆ ಸಂಪರ್ಕಿಸುವುದು.
No comments:
Post a Comment